ಕೇಂದ್ರ ಸರ್ಕಾರದ ಪ್ರಕಾರ ಎಲ್ಲಾ ಕೇಂದ್ರ ಸರ್ಕಾರಿ ಕಚೇರಿಗಳಿಗೆ ಶನಿವಾರ ಅರ್ಧ ದಿನ ರಜೆ ಇರುತ್ತದೆ.
ಶುಕ್ರವಾರ, ತೆಲಂಗಾಣ ಮತ್ತು ಕರ್ನಾಟಕದಲ್ಲಿ ಎಲ್ಲಾ ಸರ್ಕಾರಿ ಕಚೇರಿಗಳು ಮತ್ತು ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಿದೆ. ಹೆಚ್ಚುವರಿಯಾಗಿ, ಮುಂದಿನ 7 ದಿನಗಳವರೆಗೆ, ಕಾಂಗ್ರೆಸ್ ಪಕ್ಷವು ಎಲ್ಲಾ ಅಧಿಕೃತ ಕಾರ್ಯಕ್ರಮಗಳನ್ನು ರದ್ದುಗೊಳಿಸಿದೆ.
ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯು ಡಾ.ಮನಮೋಹನ್ ಸಿಂಗ್ ಅವರಿಗೆ ಎರಡು ನಿಮಿಷಗಳ ಮೌನಾಚರಣೆ ಮಾಡುವ ಮೂಲಕ ಶ್ರದ್ಧಾಂಜಲಿ ಸಲ್ಲಿಸಿತು. ಕ್ಯಾಬಿನೆಟ್ ನಿರ್ಣಯದ ಪ್ರಕಾರ ಸರ್ಕಾರಿ ಗೌರವದೊಂದಿಗೆ ಮನಮೋಹನ್ ಸಿಂಗ್ ಅಂತ್ಯಕ್ರಿಯೆ ನೆರವೇರಿಸಲಾಗುವುದು.
ಅಂತ್ಯಕ್ರಿಯೆಯ ದಿನದಂದು ಎಲ್ಲಾ ಕೇಂದ್ರ ಸರ್ಕಾರಿ ಕಚೇರಿಗಳು ಮತ್ತು ಕೇಂದ್ರ ಸಾರ್ವಜನಿಕ ವಲಯದ ಸಂಸ್ಥೆಗಳಲ್ಲಿ(CPSU) ಅರ್ಧ ದಿನದ ರಜೆಯನ್ನು ಆಚರಿಸಲಾಗುತ್ತದೆ.
ನಾಳೆ(ಶನಿವಾರ) ಬೆಳಗ್ಗೆ 8 ಗಂಟೆಗೆ ಅವರ ಪಾರ್ಥಿವ ಶರೀರವನ್ನು ಎಐಸಿಸಿ ಕೇಂದ್ರ ಕಚೇರಿಗೆ ಕೊಂಡೊಯ್ಯಲಾಗುವುದು ಮತ್ತು ಸಾರ್ವಜನಿಕರು ಮತ್ತು ಕಾಂಗ್ರೆಸ್ ಕಾರ್ಯಕರ್ತರು ನಾಳೆ ಬೆಳಗ್ಗೆ 8.30 ರಿಂದ 9.30 ರವರೆಗೆ ಶ್ರದ್ಧಾಂಜಲಿ ಸಲ್ಲಿಸಲು ಅವಕಾಶವಿದೆ ಎಂದು ಕಾಂಗ್ರೆಸ್ ಸಂಸದ ಕೆ.ಸಿ. ವೇಣುಗೋಪಾಲ್ ಹೇಳಿದ್ದಾರೆ.