ಗುಡ್ಡದಲ್ಲಿ ಮೇಯಲು ಬಿಟ್ಟಿದ್ದ ಕೊಡೆಂಕೀರಿ ನಿವಾಸಿ ಜಾರ್ಜ್ ಕುಟ್ಟಿ ಎಂಬವರಿಗೆ ಸೇರಿದ ಎರಡು ಆಡುಗಳನ್ನು ಸೋಮವಾರ ರಾತ್ರಿ ಬೈಕ್ನಲ್ಲಿ ಬಂದ ನಾಲ್ವರು ಕಳ್ಳರು ಹಿಡಿದು ಕೊಂದಿದ್ದಾರೆ. ಬಳಿಕ ಅವುಗಳನ್ನು ಕಡಬದ ವಿಶ್ವ ಹಿಂದೂ ಪರಿಷತ್ಗೆ ಸೇರಿದ್ದೆನ್ನಲಾದ ಆಯಂಬುಲೆನ್ಸ್ನಲ್ಲಿ ಸಾಗಾಟಕ್ಕೆ ಸಿದ್ಧತೆ ನಡೆಸುತ್ತಿದ್ದಾರೆನ್ನಲಾಗಿದೆ.
ಈ ವೇಳೆ ಸ್ಥಳೀಯ ಮಹಿಳೆಯೊಬ್ಬರು ಗಮನಿಸಿ ಬೊಬ್ಬೆ ಹೊಡೆದಿದ್ದಾರೆ. ಈ ವೇಳೆ ಬೈಕನ್ನು ಬಿಟ್ಟು ಆರೋಪಿಗಳು ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ.
ಬೈಕ್ನ ಜಾಡು ಹಿಡಿದ ಸ್ಥಳೀಯರು ಆರೋಪಿಗಳ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಆರೋಪಿಗಳನ್ನು ವಶಕ್ಕೆ ಪಡೆದ ಪೊಲೀಸರು ವಿಚಾರಿಸಿದಾಗ ಆಡನ್ನು ಕಳವುಗೈಯಲು ಯತ್ನಿಸಿರುವುದು ಬಯಲಾಗಿದೆ. ಆ ಬಳಿಕ ಆಡಿನ ಮಾಲಕನಿಗೆ ಪರಿಹಾರ ನೀಡುವ ಮೂಲಕ ಪ್ರಕರಣ ರಾಜಿಯಲ್ಲಿ ಇತ್ಯರ್ಥಪಡಿಸಲಾಗಿದೆ ಎಂದು ತಿಳಿದುಬಂದಿದೆ.
ಕೃತ್ಯಕ್ಕೆ ಬಳಸಿದ ಆಯಂಬುಲೆನ್ಸ್ನಲ್ಲಿ ಹಿಂದಿನಿಂದಲೂ ಅಕ್ರಮವಾಗಿ ದನದ ಮಾಂಸ ಸಾಗಾಟ ಮಾಡಲಾಗುತ್ತಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.